ಬೆಳಗಾವಿ, ಬಾಗಲಕೋಟೆ ರೈತರ ಜೊತೆಗೆ ನ.20 ರಂದು ಸಿಎಂ ಕುಮಾರಸ್ವಾಮಿ ಸಭೆ

Update: 2018-11-18 12:23 GMT

ಬೆಂಗಳೂರು,ನ.18: ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಪ್ರತಿಭಟನೆ ನಡೆಸುತ್ತಿರುವ ಬೆಳಗಾವಿ ಮತ್ತು ಬಾಗಲಕೋಟೆ ರೈತರ ಜೊತೆ ಸಿಎಂ ಕುಮಾರಸ್ವಾಮಿ ಮಂಗಳವಾರ ಸಭೆ ನಡೆಸಲಿದ್ದಾರೆ. 

ವಿಧಾನಸೌಧದಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯಲಿದೆ. ಸಭೆಯಲ್ಲಿ ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಸೋಮವಾರ ಸಂಪುಟ ಸಭೆ ಇರುವ ಕಾರಣ ಬೆಳಗಾವಿ ಪ್ರವಾಸ ರದ್ದು ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ರೈತರು ಶನಿವಾರದ ಮಧ್ಯರಾತ್ರಿಯಿಂದ ಧರಣಿ ನಡೆಸುತ್ತಿದ್ದಾರೆ. ಈ ಕಾರಣಕ್ಕಾಗಿ ಸಿಎಂ ಕುಮಾರಸ್ವಾಮಿ ಅವರು ಬಾಗಲಕೋಟೆ ಮತ್ತು ಬೆಳಗಾವಿ ರೈತರ ಜೊತೆ ಸಭೆ ನಡೆಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News