ಬಿಜೆಪಿ ನಾಯಕರು ಹಿಟ್ಲರ್ ವಂಶಸ್ಥರು: ಸಿದ್ದರಾಮಯ್ಯ

Update: 2018-11-18 13:08 GMT

ಹುಬ್ಬಳ್ಳಿ, ನ.18: ಬಿಜೆಪಿ ನಾಯಕರು ಹಿಟ್ಲರ್ ವಂಶಸ್ಥರ ರೀತಿಯಲ್ಲಿ ವರ್ತಿಸುತ್ತಿರುವುದರಿಂದ ದೇಶದಲ್ಲಿ ಸರ್ವಾಧಿಕಾರಿ ಧೋರಣೆ ಪ್ರಬಲಗೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಟ್ಲರ್ ಮನಸ್ಥಿತಿವುಳ್ಳವರಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಆತಂಕ ತಲೆದೋರಿದೆ. ಇದಕ್ಕೆ ಸಾಕ್ಷಿಯೆಂಬಂತೆ ಕೇಂದ್ರ ಸರಕಾರ ಸಿಬಿಐ ದುರುಪಯೋಗ ಪಡಿಸಿಕೊಂಡು, ಬಿಜೆಪಿಯೇತರ ನಾಯಕರ ಮೇಲೆ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದರು.

ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದೇವೆ ಎಂದ ಅವರು, ಪರಮೇಶ್ವರ್ ಮುಖ್ಯಮಂತ್ರಿ ಆಗುವ ತಮ್ಮ ಆಸೆ ಹೇಳಿಕೊಂಡಿದ್ದಾರೆ. ಕಾಂಗ್ರೆಸ್‌ನಲ್ಲಿ ಅರ್ಹ ಆಕಾಂಕ್ಷಿಗಳು ಸಾಕಷ್ಟು ಜನರಿದ್ದಾರೆ. ಆದರೆ, ಸದ್ಯ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲವೆಂದು ಅವರು ಪ್ರತಿಕ್ರಿಯಿಸಿದರು.

ಇಂದಿರಾ ಕ್ಯಾಟಿಂನ್‌ನಿಂದ ಕಾಂಗ್ರೆಸ್‌ಗೆ ಒಳ್ಳೆ ಹೆಸರು ಬಂದುಬಿಡುತ್ತೆ ಎಂದು ಬಿಜೆಪಿಯವರು ಅಡ್ಡಗಾಲು ಹಾಕುತ್ತಿದ್ದಾರೆ. ಇದು ಸರಿಯಲ್ಲ. ಈ ಬಗ್ಗೆ ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News