ನಾನೇಕೆ ರಾಜೀನಾಮೆ ನೀಡಲಿ: ಸಚಿವ ರಮೇಶ್ ಜಾರಕಿಹೊಳಿ ಪ್ರಶ್ನೆ

Update: 2018-11-19 13:51 GMT

ಬೆಂಗಳೂರು, ನ. 19: ‘ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬ ಸುದ್ದಿ ಶುದ್ಧ ಸುಳ್ಳು. ನಾನು ಏಕೆ ರಾಜೀನಾಮೆ ನೀಡಲಿ’ ಎಂದು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಇಂದಿಲ್ಲಿ ಪ್ರಶ್ನಿಸಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಮೈತ್ರಿಕೂಟ ಸರಕಾರದಲ್ಲಿ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಬವಿಸಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೆಲ ಮಾಧ್ಯಮಗಳ ವರದಿಗಳಲ್ಲಿ ಯಾವುದೇ ಹುರುಳಿಲ್ಲ’ ಎಂದು ಸ್ಪಷ್ಟಣೆ ನೀಡಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿಂದು ನಡೆದ ಸಚಿವ ಸಂಪುಟ ಸಭೆಯಿಂದ ಅನ್ಯ ಕಾರ್ಯ ನಿಮಿತ್ತ ನಾನು ಸಿಎಂ ಸಮ್ಮತಿ ಪಡೆದೆ ಹೊರ ಬಂದಿದ್ದೇನೆ. ಆದರೆ, ಅದೆ ಕಾರಣಕ್ಕೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆಂಬುದು ಅಕ್ಷರಶಃ ಸುಳ್ಳು ಎಂದು ನಿರಾಕರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News