ಮಂಗಳೂರು: ಜೂಜಾಟವಾಡುತ್ತಿದ್ದ ಐವರ ಬಂಧನ

Update: 2018-11-19 17:18 GMT

ಮಂಗಳೂರು, ನ.19: ಅತ್ತಾವರ ಅಪಾರ್ಟ್‌ಮೆಂಟ್‌ವೊಂದರ ನೆಲ ಅಂತಸ್ತಿನ ಪಾರ್ಕಿಂಗ್ ಸ್ಥಳದಲ್ಲಿ ಜೂಜಾಟವಾಡುತ್ತಿದ್ದ ಆರೋಪದ ಮೇಲೆ ಐವರನ್ನು ಸೋಮವಾರ ಸಂಜೆ ಬಂಧಿಸಲಾಗಿದೆ.

ತೊಕ್ಕೊಟ್ಟು ಒಳಪೇಟೆ ನಿವಾಸಿ ಮನೋಜ್(34), ಸುರತ್ಕಲ್ ಕಾನ್‌ಕಟ್ಲ ನಿವಾಸಿ ಮುಹಮ್ಮದ್ ಅನ್ವರ್(26), ತೊಕ್ಕೊಟ್ಟು ವಾಸೂಕಿ ನಗರ ನಿವಾಸಿ ರೆನ್ನಿ ಆರ್.(25), ವಾಸೂಕಿ ನಗರ ನಿವಾಸಿ ರಕ್ಷಿತ್ ಎಂ.(28), ಲ್ಯಾನ್ಸಿ ಕರ್ನೆಲಿಯೋ (45) ಬಂಧಿತ ಆರೋಪಿಗಳು.

ಆರೋಪಿಗಳು ನ.19ರಂದು ಸಂಜೆ 3:45ರ ವೇಳೆಗೆ ಅತ್ತಾವರದ ಅಪಾರ್ಟ್‌ಮೆಂಟ್ ಕಟ್ಟಡದ ನೆಲ ಅಂತಸ್ತಿನ ಪಾರ್ಕಿಂಗ್ ಸ್ಥಳದಲ್ಲಿರುವ ಕೊಠಡಿಯಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಟೀಟ್ ಮೂಲಕ ಜುಗಾರಿ ಆಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಾಂಡೇಶ್ವರ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ ಜುಗಾರಿ ಆಟಕ್ಕೆ ಬಳಿಸಿದ ನಗದು 80,700 ರೂ. ಸೇರಿದಂತೆ ಇತರ ಸೊತ್ತುಗಳನ್ನು ಸ್ವಾಧೀನಪಡಿಸಲಾಗಿದೆ.

ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಡಿಸಿಪಿಗಳಾದ ಹನುಮಂತರಾಯ, ಉಮಾಪ್ರಶಾಂತ್, ಎಸಿಪಿ ಭಾಸ್ಕರ್ ಒಕ್ಕಲಿಗ ಮಾರ್ಗದರ್ಶನದಲ್ಲಿ ಪಾಂಡೇಶ್ವರ ಠಾಣಾ ನಿರೀಕ್ಷಕ ಮುಹಮ್ಮದ್ ಶರ್ೀ ಕೆ. ನೇತೃತ್ವದಲ್ಲಿ ಪೊಲೀಸ್ ಉಪನಿರೀಕ್ಷಕ ರಾಜೇಂದ್ರ ಬಿ. ಆರೋಪಿಗಳನ್ನು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News