ಕೇಜ್ರಿವಾಲ್ ಮೇಲೆ ಮೆಣಸಿನ ಪುಡಿ ಎರಚಿದ ವ್ಯಕ್ತಿ

Update: 2018-11-20 10:43 GMT

ಹೊಸದಿಲ್ಲಿ, ನ.20: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಮೆಣಸಿನ ಪುಡಿ ಎರಚಿದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕೃತ್ಯ ಎಸಗಿದ ವ್ಯಕ್ತಿಯನ್ನು ಅನಿಲ್ ಕುಮಾರ್ ಎಂದು ಗುರುತಿಸಲಾಗಿದೆ,

ಮುಖ್ಯಮಂತ್ರಿಗಳ ಚೇಂಬರ್ ನಿಂದ ಕೇಜ್ರಿವಾಲ್ ಊಟಕ್ಕೆ ತೆರಳುತ್ತಿದ್ದಾಗ ಈ ದಾಳಿ ನಡೆದಿತ್ತು ಎನ್ನಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಆಮ್ ಆದ್ಮಿ, “ದಿಲ್ಲಿ ಪೊಲೀಸರಿಂದ ಗಂಭೀರ ಭದ್ರತಾ ಲೋಪ. ದಿಲ್ಲಿಯಲ್ಲಿ ಮುಖ್ಯಮಂತ್ರಿ ಕೂಡ ಸುರಕ್ಷಿತರಲ್ಲ” ಎಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News