ಶಿವಮೊಗ್ಗ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವು

Update: 2018-11-20 12:28 GMT

ಶಿವಮೊಗ್ಗ, ನ. 20: ರಸ್ತೆ ಅಪಘಾತದಲ್ಲಿ ಗಾಯಗೊಂಡು ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭದ್ರಾವತಿ ತಾಲೂಕಿನ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ನಾಗೇಂದ್ರ ಯಾನೆ ನಾಗರಾಜ್ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಇವರು ಶ್ರೀಕಾಂತ್ ಎಂಬವರು ಚಲಾಯಿಸುತ್ತಿದ್ದ ಬೈಕ್‍ನಲ್ಲಿ ಆಗಮಿಸುತ್ತಿದ್ದಾಗ, ಭದ್ರಾವತಿ ತಾಲೂಕಿನ ಕಾರೇಹಳ್ಳ ಗ್ರಾಮದ ಎನ್.ಹೆಚ್. 206 ರಸ್ತೆಯಲ್ಲಿ ಬಿಎಂಡಬ್ಲ್ಯೂ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿತ್ತು.

ಘಟನೆಯಲ್ಲಿ ಬೈಕ್ ಸವಾರ ಶ್ರೀಕಾಂತ್ ಹಾಗೂ ಹಿಂಬದಿ ಸವಾರ ನಾಗೇಂದ್ರ ಗಾಯಗೊಂಡಿದ್ದರು. ಇದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾಗೇಂದ್ರರವರಿಗೆ, ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಅಸುನೀಗಿದ್ದಾರೆ. ಈ ಕುರಿತಂತೆ ಕಾರು ಚಾಲಕನ ವಿರುದ್ಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News