ಬೆಂಗಳೂರು: ಕಾರು ಢಿಕ್ಕಿಯಾಗಿ ಪಾದಚಾರಿ ಮೃತ್ಯು
Update: 2018-11-20 14:27 GMT
ಬೆಂಗಳೂರು, ನ.20: ಶರ ವೇಗವಾಗಿ ಸಾಗುತ್ತಿದ್ದ ಕಾರು, ನಿಯಂತ್ರಣ ತಪ್ಪಿ ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆದ ಪರಿಣಾಮ, ಆತ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಲ್ಲಿನ ದೇವನಹಳ್ಳಿ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.