ಮಂಗಳೂರು: ಎ.ಕೆ. ವಿಜಯ್‌ಗೆ ರಂಗ ಚಾವಡಿ ಪ್ರಶಸ್ತಿ ಪ್ರದಾನ

Update: 2018-11-20 15:47 GMT

ಮಂಗಳೂರು, ನ.20: ರಂಗ ಚಾವಡಿ ಸಾಹಿತ್ಯಿಕ-ಸಾಂಸ್ಕೃತಿಕ ಸಂಘಟನೆಯ ವತಿಯಿಂದ ಖ್ಯಾತ ಸಂಗೀತ ನಿರ್ದೇಶಕ ಎ.ಕೆ. ವಿಜಯ್‌ಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಗ ಚಾವಡಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಉದ್ಯಮಿ ಕುಸುಮೋದರ ಡಿ. ಶೆಟ್ಟಿ ಚೆಲ್ಲಡ್ಕ ಕಾರ್ಯಕ್ರಮ ಉದ್ಘಾಟಿಸಿದರು. ಚಲನಚಿತ್ರ ನಿರ್ಮಾಪಕ ಡಾ. ಸಂಜೀವ ದಂಡೆಕೇರಿ ಅಧ್ಯಕ್ಷತೆ ವಹಿಸಿದ್ದರು. ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಎ.ಸಿ. ಭಂಡಾರಿ ಮಾತನಾಡಿದರು.

ರಂಗನಟ ವಿ.ಜಿ. ಪಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮ ದಲ್ಲಿ ಉದ್ಯಮಿಗಳಾದ ರಮಾನಾಥ ಶೆಟ್ಟಿ ಕೃಷ್ಣಾಪುರ, ಯಾದವ ಕೋಟ್ಯಾನ್ ಪೆರ್ಮುದೆ, ಚಲನಚಿತ್ರ ನಿರ್ಮಾಪಕ ರವಿ ರೈ ಕಳಸ, ಕ್ಯಾಟ್ಕಾ ಅಧ್ಯಕ್ಷ ಪಮ್ಮಿ ಕೊಡಿಯಾಲ್ ಬೈಲ್, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜಾ ಹೊಸಬೆಟ್ಟು, ಗಿರೀಶ್ ಎಂ. ಶೆಟ್ಟಿ ಕಟೀಲು, ಸತೀಶ್ ಮುಂಚೂರು, ಎಂ. ದೇವಾನಂದ ಶೆಟ್ಟಿ, ಡಿವೈಎಸ್ಪಿ ಪಡ್ರೆ ದಿನಕರ ಶೆಟ್ಟಿ, ಕಾರ್ಪೊರೇಟರ್ ಅಶೋಕ್ ಶೆಟ್ಟಿ ಸುರತ್ಕಲ್, ರಂಗ ಚಾವಡಿ ಸಂಚಾಲಕ ಜಗನ್ನಾಥ್ ಶೆಟ್ಟಿ ಬಾಳ ಉಪಸ್ಥಿತರಿದ್ದರು.

ಬಿಂದಿಯಾ ಶೆಟ್ಟಿ ಪ್ರಾರ್ಥಿಸಿದರು. ನವೀನ್ ಶೆಟ್ಟಿ ಎಡ್ಮೆಮಾರ್ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News