ಕೆ.ಆರ್.ಪೇಟೆ: ವಿಷ ಸೇವಿಸಿ ದಂಪತಿ ಆತ್ಮಹತ್ಯೆ

Update: 2018-11-20 16:51 GMT

ಕೆ.ಆರ್.ಪೇಟೆ, ನ.20: ತಮ್ಮ ಜಮೀನಿನ ಬಳಿ ವಿಷದ ಮಾತ್ರೆ ನುಂಗಿ ದಂಪತಿ ಆತ್ಮಹತ್ಯೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಬೋರಲಿಂಗೇಗೌಡ(60) ಮತ್ತು ಲಕ್ಷ್ಮಮ್ಮ(52) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇವರು ಸೋಮವಾರ ತಡರಾತ್ರಿ ಮುತ್ತುರಾಯಸ್ವಾಮಿ ದೇವಾಲಯದ ಪಕ್ಕದಲ್ಲಿರುವ ತಮ್ಮ ಜಮೀನಿನ ಬಳಿ ತೆರಳಿ ವಿಷಪೂರಿತ ಕಾಳಿನ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮಂಗಳವಾರ ಬೆಳಗ್ಗೆ ಜಮೀನಿನ ಬಳಿ ಬಿದ್ದಿದ್ದ ಮೃತ ದೇಹಗಳನ್ನು ಕಂಡ ಗ್ರಾಮಸ್ಥರು ತಕ್ಷಣ ಪೊಲೀಸರಿಗೆ ವಿಷಯ ಮುಟ್ಟಿಸಿದರು.  ಸರ್ಕಲ್ ಇನ್ಸ್ ಪೆಕ್ಟರ್ ಎಚ್.ಬಿ.ವೆಂಕಟೇಶಯ್ಯ, ಸಬ್‍ಇನ್ಸ್ ಪೆಕ್ಟರ್ ಆನಂದಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೃತ ದಂಪತಿ ಕೃಷಿಗಾಗಿ ಸಾಕಷ್ಟು ಕೈಸಾಲ ಮಾಡಿಕೊಂಡಿದ್ದು, ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News