ಮೈಸೂರು: ಜೆಡಿಎಸ್ ಮುಖಂಡನ ಪುತ್ರ ಆತ್ಮಹತ್ಯೆ

Update: 2018-11-20 17:51 GMT

ಮೈಸೂರು,ನ.20: ಜೆಡಿಎಸ್ ಮುಖಂಡರೋರ್ವರ ಪುತ್ರ ನೇಣಿಗೆ ಶರಣಾದ ಘಟನೆ ಮೈಸೂರಿನ ವಿಜಯನಗರ ಮೂರನೇ ಹಂತದ ಬಸವರಾಜ ವೃತ್ತದ ಸಮೀಪ ನಡೆದಿದೆ.

ಮೃತನನ್ನು ಜೆಡಿಎಸ್ ಮುಖಂಡ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕೆಂಪನಾಯಕ ಅವರ ಪುತ್ರ ಶ್ರೇಯಸ್ (17) ಎಂದು ಗುರುತಿಸಲಾಗಿದೆ. ಈಗ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಆತ ಮನೆಯಲ್ಲಿ ಯಾರೂ ಇಲ್ಲದ ವೇಳೆ ರೂಮಿನಲ್ಲಿ ನೇಣಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿಜಯನಗರ ಪೊಲೀಸರು ಭೇಟಿ ನಿಡಿ ಪರಿಶೀಲನೆ ನಡೆಸಿದರು. ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದುಬಂದಿಲ್ಲ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News