ನಂತೂರು ಸರ್ಕಲ್ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಚಾಲಕನಿಗೆ ಗಾಯ
Update: 2018-11-21 04:46 GMT
ಮಂಗಳೂರು, ನ.21: ಅನಿಲ ತುಂಬಿದ ಟ್ಯಾಂಕರ್ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಉರುಳಿಬಿದ್ದ ಘಟನೆ ನಗರದ ನಂತೂರು ಸರ್ಕಲ್ ಬಳಿ ಇಂದು ಮುಂಜಾವ ನಡೆದಿದೆ. ಘಟನೆಯಲ್ಲಿ ಟ್ಯಾಂಕರ್ ಚಾಲಕ ಗಾಯಗೊಂಡಿದ್ದು, ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಿಂದ ಕುಲಶೇಖರ-ಮಂಗಳೂರು ರಸ್ತೆ ಸೇರಿದಂತೆ ಪಡೀಲ್ ಮಾರ್ಗದವರೆಗೂ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಸಾರ್ವಜನಿಕರ ಸಹಕಾರದಿಂದ ಕ್ರೇನ್ ಬಳಸಿ ಟ್ಯಾಂಕರ್ನ್ನು ರಸ್ತೆಯಿಂದ ತೆರವುಗೊಳಿಸಿದರು.
ಇಂದು ಮುಂಜಾನ 4 ಗಂಟೆ ಸುಮಾರಿಗೆ ನಂತೂರು ಸರ್ಕಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಡಿವೈಡರ್ಗೆ ಢಿಕ್ಕಿಯಾಗಿ ಬಳಿಕ ರಸ್ತೆಯಲ್ಲೇ ಉರುಳಿಬಿದ್ದಿದೆ. ಇದರಿಂದ ಇಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಗ್ಯಾಸ್ ಸೋರಿಕೆ ಭೀತಿಯಿಂದ ಪರಿಸರದಲ್ಲಿ ವಿದ್ಯುತ್ ಸಂಪರ್ಕವನ್ನು ಸ್ಠಗಿತಗೊಳಿಸಲಾಗಿತ್ತು. ಅದೃಷ್ಟವಶಾತ್ ಯಾವುದೇ ಸೋರಿಕೆ ಕಂಡುಬಂದಿರಲಿಲ್ಲ