ನಾನು ಮುಖ್ಯಮಂತ್ರಿ ಆಕಾಂಕ್ಷಿಯಲ್ಲ: ಡಾ.ಜಿ.ಪರಮೇಶ್ವರ್

Update: 2018-11-21 08:46 GMT

ತುಮಕೂರು, ನ.21: ‘‘ನಾನು ಸಿಎಂ ಆಕಾಂಕ್ಷಿ ಎಂದು ಬಾಯಿ ಚಪಲಕ್ಕೆ ಕೆಲವರು ಮಾತನಾಡುತ್ತಾರೆ. ನಾನು ಸಿಎಂ ಸ್ಥಾನ ಆಕಾಂಕ್ಷಿ ಎಂದು ಎಲ್ಲೂ ಕೂಡ ಹೇಳಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಈ ರೀತಿ ಪ್ರತಿಕ್ರಿಯಿಸಿದರು.

ರಾಜ್ಯದಲ್ಲಿ ಸಿಎಂ ಇದ್ದಾರೆ, ಸರಕಾರ ಇದೆ. ಈಗ ಯಾಕೆ ಸಿಎಂ ಸ್ಥಾನದ ವಿಚಾರ ಎಂದ ಅವರು, ನಾನು ಪ್ರದೇಶ ಕಾಂಗ್ರೆಸ್ ಅಧ್ಯಕ್ಷನಾಗಿದ್ದಾಗಲೇ ಸಮ್ಮಿಶ್ರ ಸರಕಾರ ರಚನೆಯಾಗಿದ್ದು, ಸುಖಾಸುಮ್ಮನೆ ಬಾಯಿ ಚಪಲಕ್ಕೆ ಈ ವಿಚಾರ ಮಾತನಾಡುತ್ತಾರೆ ಎಂದು ಪುನರುಚ್ಚರಿಸಿದರು.

ಕೆಲವರು ಸಿಎಂ ಸ್ಥಾನ ನಿರ್ವಹಿಸುವ ಸಾಮರ್ಥ್ಯ ಇದೆಯಾ ಎಂದು ಕೇಳಿದ್ದರು. ಅದಕ್ಕೆ ನಾನು ‘ಹೂಂ’ ಅಂತಾ ಹೇಳಿದ್ದೆ ಅಷ್ಟೆ. ಇದಕ್ಕೆ ಅನಗತ್ಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News