ಬಂಟ್ವಾಳ: ಹರಿಕೃಷ್ಣ ಹೇಳಿಕೆಗೆ ಕಾಂಗ್ರೆಸ್ ಖಂಡನೆ

Update: 2018-11-21 15:49 GMT

ಬಂಟ್ವಾಳ, ನ. 21: ಪುರಸಭಾ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡಗಳಿಗೆ ಮಾಜಿ ಸಚಿವ ರಮಾನಾಥ ರೈ ಅವರೇ ಕುಮ್ಮಕ್ಕು ನೀಡುತ್ತಿದ್ದಾರೆಂದು ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ ಅವರ ಹೇಳಿಕೆಯನ್ನು ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ ಖಂಡಿಸಿದ್ದಾರೆ.

ಹರಿಕೃಷ್ಣ ಬಂಟ್ವಾಳ ಅವರ ಇತ್ತೀಚಿಗಿನ ಹೇಳಿಕೆಗಳನ್ನು ನೋಡಿದರೆ ಅವರು ಮಾನಸಿಕ ಸ್ಥಿಮಿತ ಕಳಕೊಂಡವರಂತೆ ಮೇಲ್ನೊಟಕ್ಕೆ ಕಂಡು ಬರುತ್ತಿದೆ ಎಂದು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಬಂಗೇರ, ಪುರಸಭೆಯಲ್ಲಿ ಬಿಜೆಪಿ ಆಡಳಿತವಿದ್ದಾಗ ಪ್ರಾಧಿಕಾರದ ಅನುಮತಿ ಪಡೆಯದೆ ಕಾನೂನು ಬಾಹಿರವಾಗಿ ಕಟ್ಟಡಗಳಿಗೆ ಬೇಕಾಬಿಟ್ಟಿಯಾಗಿ ಅನುಮತಿ ನೀಡಿರುವುದನ್ನು ಹರಿಕೃಷ್ಣರಿಗೆ ದಿಗ್ಬ್ರಮೆಯಾದೀತು ಎಂದು ತಿಳಿಸಿದ್ದಾರೆ.

ಹಾಗೆಯೇ ಹರಿಕೃಷ್ಣರ ಇತ್ತೀಚಿಗಿನ ಭಾಷಣಗಳನ್ನು ಕೇಳಿದರೆ ಅವರು ಹೆಚ್ಚು ಕಾಲ ಬಿಜೆಪಿಯಲ್ಲಿ ಇರಲಾರರು ಎಂದು ಭಾಸವಾಗುತ್ತಿದೆ. ರಾಜಕೀಯ ಇತಿಹಾಸದಲ್ಲಿ ರಮಾನಾಥ ರೈ ಅವರು ಬಂಟ್ವಾದ ಅಭಿವೃದ್ಧಿಯ ಹರಿಕಾರ ಮತ್ತು ಎಲ್ಲಾ ಧರ್ಮವನ್ನು ಪ್ರೀತಿಸುವ ನಾಯಕರಾಗಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News