ಆ್ಯಂಬಿಡೆಂಟ್ ವಂಚನೆ ಪ್ರಕರಣ: ಮೊಬೈಲ್ ಜಪ್ತಿ

Update: 2018-11-21 17:15 GMT

ಬೆಂಗಳೂರು, ನ.21: ಆ್ಯಂಬಿಡೆಂಟ್ ವಂಚನೆ ಆರೋಪ ಪ್ರಕರಣ ಸಂಬಂಧ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ನಿವಾಸದ ಮೊಬೈಲ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.

ಜನಾರ್ದನ ರೆಡ್ಡಿ ನಿವಾಸ ಪಾರಿಜಾತದಲ್ಲಿ ಕೆಲಸಗಾರ ಜಯರಾಮ್ ಎಂಬಾತ ಅಲಿಖಾನ್ ಸೂಚನೆ ಮೇರೆಗೆ ಮೊಬೈಲ್ ಬಾವಿಗೆ ಎಸೆದಿದ್ದ. ಈ ಬಗ್ಗೆ ವಿಚಾರಣೆ ವೇಳೆ ಜಯರಾಮ್ ಬಾಯಿಬಿಟ್ಟಿದ್ದ. ಈ ಮಾಹಿತಿ ಆಧರಿಸಿ ಬಾವಿ ಬಳಿಗೆ ತೆರಳಿದ ಸಿಸಿಬಿ ಪೊಲೀಸರು ಮೊಬೈಲ್ ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಬಾವಿಗಿಳಿದು ಮೊಬೈಲ್ ಪತ್ತೆ ಹಚ್ಚಿದ್ದಾರೆ. ಸದ್ಯ ಮೊಬೈಲ್‌ನಲ್ಲಿರುವ ಮಾಹಿತಿ ಪಡೆಯಲು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ. ಕೋರ್ಟ್ ವಿಚಾರಣೆ ವೇಳೆ ಈ ಮಾಹಿತಿ ಬಹಿರಂಗ ಪಡಿಸಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News