×
Ad

ಉಡುಪಿ: ಪಿಂಚಣಿ, ಕಂದಾಯ ಅದಾಲತ್

Update: 2018-11-22 21:48 IST

ಉಡುಪಿ, ನ. 22: ತಾಲೂಕಿನ ಉಡುಪಿ ಹೋಬಳಿ ವ್ಯಾಪ್ತಿಯ ಗ್ರಾಮಗಳ ಕಂದಾಯ ಅದಾಲತ್ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮ ನ. 29 ರಂದು ಬನ್ನಂಜೆಯ ಹಳೆ ಜಿಪಂ ಕಟ್ಟಡದ ಮೊದಲನೆ ಮಹಡಿಯಲ್ಲಿ ಬೆಳಗ್ಗೆ 10ರಿಂದ 11 ಗಂಟೆಯವರೆಗೆ ಪಿಂಚಣಿ ಅದಾಲತ್ ಹಾಗೂ 11:30ರಿಂದ 1:30ರವರೆಗೆ ಕಂದಾಯ ಅದಾಲತ್ ಕಾರ್ಯಕ್ರಮ ನಡೆಯಲಿದೆ ಎಂದು ಉಡುಪಿ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಂದಾಪುರ: ತಾಲೂಕಿನ ವಂಡ್ಸೆ ಹೋಬಳಿಯ ವಂಡ್ಸೆ ನಾಡಕಛೇರಿಯಲ್ಲಿ ಕುಂದಾಪುರ ಉಪ ವಿಬಾಗದ ಸಹಾಯಕ ಕಮೀಷನರ್‌ರ ಅಧ್ಯಕ್ಷತೆಯಲ್ಲಿ ನ.27ರಂದು ಅಪರಾಹ್ನ 3ರಿಂದ 4 ರವರೆಗೆ ಪಿಂಚಣಿ ಅದಾಲತ್ ಹಾಗೂ ಸಂಜೆ 4ರಿಂದ 5:30ರವರೆಗೆ ಕಂದಾಯ ಅದಾಲತ್ ಕಾರ್ಯಕ್ರಮ ನಡೆಯಲಿದೆ.

ಸಾರ್ವಜನಿಕರು ಪಿಂಚಣಿ ಹಾಗೂ ಕಂದಾಯ ಅದಾಲತ್ ಕಾರ್ಯಕ್ರಮ ದಲ್ಲಿ ಭಾಗವಹಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕುಂದಾಪುರ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News