×
Ad

ಉಡುಪಿ: ಎಸಿಬಿಯಿಂದ ಅಹವಾಲು ಸ್ವೀಕಾರ

Update: 2018-11-23 20:44 IST

ಉಡುಪಿ, ನ. 23: ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿಗಳು ನ. 27ರಂದು ಬೆಳಿಗ್ಗೆ 11ರಿಂದ ಅಪರಾಹ್ನ 1 ರವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ, 2:30ರಿಂದ ಸಂಜೆ 4:30ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಹಾಗೂ ನ.28ರಂದು ಬೆಳಗ್ಗೆ 11ರಿಂದ 1 ರವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಹಾಗೂ ಅಪರಾಹ್ನ 2:30ರಿಂದ ಸಂಜೆ 4:30ರವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ ಮತ್ತು ನ.29ರಂದು ಬೆಳಗ್ಗೆ 11ರಿಂದ 1 ಗಂಟೆಯವರೆಗೆ ಕಾಪು ವೀರಭದ್ರ ಸಭಾಭವನದಲ್ಲಿ ಮೊಕ್ಕಾ ಇದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಸಾರ್ವಜನಿಕ ನೌಕರರು ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದ್ದಲ್ಲಿ, ನಿರ್ಲಕ್ಷ ತೋರಿದಲ್ಲಿ ಅಥವಾ ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News