ದುಬೈ: ವಿಶ್ವ ತುಳು ಸಮ್ಮೇಳನ

Update: 2018-11-23 18:17 GMT

ಅಖಿಲ ಭಾರತ ತುಳು ಒಕ್ಕೂಟ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಜಂಟಿಯಾಗಿ ದುಬೈಯ ಅಲ್ ನಸಾರ್ ಲೀಸ ಲ್ಯಾಂಡ್ ಐಸ್‌ರಿಂಕ್ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ ವಿಶ್ವ ತುಳು ಸಮ್ಮೇಳನವನ್ನು ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ಈ ಸಂದರ್ಭ ಅನಿವಾಸಿ ಭಾರತೀಯ ಉದ್ಯಮಿ ಡಾ.ಬಿ.ಆರ್. ಶೆಟ್ಟಿ, ಮಂಗಳೂರಿನ ಬಿಷಪ್ ಪೀಟರ್ ಪೌಲ್ ಸಲ್ಡಾನ, ಬಳ್ಳಾರಿಯ ಬಿಷಪ್ ಹೆನ್ರಿ ಡಿಸೋಜ, ಸಿಎಸ್‌ಐ ಪ್ರೊಟೆಸ್ಟೆಂಟ್ ಚರ್ಚ್‌ನ ಫಾ.ಎಬ್ನೆಝರ್ ಜತ್ತನ್ನ, ‘ವಾರ್ತಾಭಾರತಿ’ಯ ಪ್ರಧಾನ ಸಂಪಾದಕ ಅಬ್ದುಸ್ಸಲಾಂ ಪುತ್ತಿಗೆ, ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಎ.ಸಿ.ಭಂಡಾರಿ, ಯುಎಇ ತುಳುವಾಸ್ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor