ಮಂಡ್ಯ: ಅಂಬರೀಶ್ ಅಭಿಮಾನಿ ಆತ್ಮಹತ್ಯೆ?
Update: 2018-11-25 07:49 GMT
ಮಂಡ್ಯ, ನ.25: ರೆಬೆಲ್ ಸ್ಟಾರ್ ಅಂಬರೀಶ್ ಅವರ ಅಭಿಮಾನಿ ಎನ್ನಲಾದ ವ್ಯಕ್ತಿಯೋರ್ವ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮದ್ದೂರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮದ್ದೂರು ತಾಲೂಕಿನ ಹೊಟ್ಟೆ ಗೌಡನದೊಡ್ಡಿಯ ತಮ್ಮಯ್ಯ(55) ಆತ್ಮಹತ್ಯೆ ಮಾಡಿಕೊಂಡವರು. ಇವರ ಮೃತದೇಹ ಇಂದು ಬೆಳಗ್ಗೆ 10:30ರ ಸುಮಾರಿಗೆ ರೈಲು ಹಳಿಯಲ್ಲಿ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತದೇಹಕ್ಕಿಂತ ಸ್ವಲ್ಪ ದೂರದಲ್ಲಿ ರೈಲು ಹಳಿಯ ಸಮೀಪ ಚಪ್ಪಲಿ, ಒಂದು ಟೀಶರ್ಟ್ ಜೊತೆಗೆ ಅಂಬರೀಶ್ ಅವರ ದೊಡ್ಡ ಭಾವಚಿತ್ರವೊಂದು ಪತ್ತೆಯಾಗಿದೆ.
ಅಂಬರೀಶ್ ಅವರ ಅಪ್ಪಟ ಅಭಿಮಾನಿಯಾಗಿದ್ದ ತಮ್ಮಯ್ಯ ಅವರು ಅಂಬಿಯ ಸಾವಿನ ಸುದ್ದಿ ತಿಳಿದು ತೀವ್ರ ಆಘಾತಕ್ಕೊಳಗಾಗಿದ್ದರು. ಇದೇ ಕಾರಣಕ್ಕೆ ತಮ್ಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.