ಜಾಫರ್ ಶರೀಫ್ ನಿಧನಕ್ಕೆ ಸಚಿವ ಕೃಷ್ಣಬೈರೇಗೌಡ ತೀವ್ರ ಸಂತಾಪ

Update: 2018-11-25 14:46 GMT

ಬೆಂಗಳೂರು, ನ. 25: ಹಿರಿಯ ರಾಜಕೀಯ ಮುತ್ಸದ್ಧಿ, ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್ ಶರೀಫ್ ಅವರ ನಿಧನಕ್ಕೆ ಗ್ರಾಮೀಣಾಭಿವೃದ್ಧಿ, ಕಾನೂನು, ಸಂಸದೀಯ ವ್ಯವಹಾರ ಸಚಿವ ಕೃಷ್ಣಬೈರೇಗೌಡ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಕಂಡ ರಾಜಕೀಯ ಮುತ್ಸದ್ಧಿಗಳಲ್ಲಿ ಜಾಫರ್ ಶರೀಫ್ ಅಗ್ರಗಣ್ಯರು. ಕಾಂಗ್ರೆಸ್ ನ ಪ್ರಭಾವಶಾಲಿ ನಾಯಕರಾಗಿದ್ದ ಅವರು ಕೇಂದ್ರ ರೈಲ್ವೇ ಸಚಿವರಾಗಿ, ಕಲ್ಲಿದ್ದಲು ಸಚಿವರಾಗಿ ಮಾಡಿದ ಕೆಲಸ ಪ್ರಶಂಸನೀಯ. ಕರ್ನಾಟಕಕ್ಕೆ ಅವರ ಕೊಡುಗೆ ಅಪಾರವಾದದ್ದು. ಜಾತ್ಯಾತೀತ ನಾಯಕರಾಗಿ ಎಲ್ಲಾ ಜನ ವರ್ಗದ ಪ್ರೀತಿ ಗಳಿಸಿದ್ದ ಜಾಫರ್ ಶರೀಫ್ ಅವರ ನಿಧನದಿಂದ ಕರ್ನಾಟಕ ಓರ್ವ ಧೀಮಂತ ನಾಯಕನನ್ನು ಕಳೆದುಕೊಂಡಿದೆ. ಅವರ ನಿಧನದ ದುಃಖ ಭರಿಸುವ ಶಕ್ತಿ ಅವರ ಕುಟುಂಬಕ್ಕೆ ಸಿಗಲಿ ಎಂದು ಸಚಿವ ಕೃಷ್ಣಬೈರೇಗೌಡ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News