ಸೇತುವೆಯಿಂದ ನದಿಗೆ ಬಿದ್ದ ಬಸ್: 9 ಮಂದಿ ಮೃತ್ಯು

Update: 2018-11-25 15:40 GMT
ಫೋಟೊ ಕೃಪೆ: ಎಎನ್ ಐ

ಹಿಮಾಚಲ ಪ್ರದೇಶ, ನ.25: ಅತೀ ವೇಗದಿಂದ ಚಲಿಸುತ್ತಿದ್ದ ಬಸ್ಸೊಂದು ಸೇತುವೆಯಿಂದ ನದಿಗೆ ಬಿದ್ದ ಪರಿಣಾಮ 9 ಮಂದಿ ಮೃತಪಟ್ಟು 25ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ನಡೆದಿದೆ.

ಶಿಮ್ಲಾದಿಂದ 168 ಕಿ.ಮೀ. ದೂರದಲ್ಲಿರುವ ಖಾದ್ರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೇಣುಕಾ ಜಿಯಿಂದ ನಹಾನ್ ಗೆ ಈ ಖಾಸಗಿ ಬಸ್ ತೆರಳುತ್ತಿತ್ತು ಎನ್ನಲಾಗಿದೆ. ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಸೇತುವೆ ಗೋಡೆಗೆ ಅಪ್ಪಳಿಸಿ 40 ಅಡಿ ಆಳದ ನದಿಗೆ ಬಿದ್ದಿದೆ ಎಂದ ಪೊಲೀಸ್ ಅಧಿಕಾರಿ ವಿರೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.

3 ಮಹಿಳೆಯರು ಸೇರಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಐವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 25ಕ್ಕೂ ಅಧಿಕ ಗಾಯಾಳುಗಳನ್ನು ನಹಾನ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News