ಅಂಬರೀಶ್ ನಿಧನ ಹಿನ್ನೆಲೆ: ಮಂಡ್ಯದಲ್ಲಿ ಸ್ವಯಂಪ್ರೇರಿತ ಬಂದ್ ಮೂಲಕ ಶ್ರದ್ಧಾಂಜಲಿ

Update: 2018-11-25 17:25 GMT

ಮಂಡ್ಯ, ನ.25: ನಟ, ಮಾಜಿ ಸಚಿವ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ರವಿವಾರ ಜಿಲ್ಲೆಯ ನಾನಾ ಪಟ್ಟಣಗಳಲ್ಲಿ ವ್ಯಾಪಾರ ವಹಿವಾಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಪಾಂಡವಪುರ, ಮದ್ದೂರು, ಬೆಸಗರಹಳ್ಳಿ, ಕೆ.ಎಂ.ದೊಡ್ಡಿ ಮತ್ತಿತರ ಕಡೆ ಅಂಗಡಿ ಮಾಲಕರು ಅಂಗಡಿಗಳನ್ನು ಸ್ವಯಂಪ್ರೇರಿತವಾಗಿ ಸಂಜೆವರೆಗೂ ಬಂದ್ ಮಾಡಿ, ಅಂಬರೀಶ್ ಅವರ ಭಾವಚಿತ್ರವಿನ್ನಿಟ್ಟು ಶ್ರದ್ಧಾಂಜಲಿ ಸಲ್ಲಿಸಿದರು.

ಜಿಲ್ಲಾ ಕೇಂದ್ರ ಮಂಡ್ಯದಲ್ಲೂ ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ಚಲನಚಿತ್ರ ಮಂದಿರಗಳನ್ನೂ ಬಂದ್ ಮಾಡಿ ಅಗಲಿದ ನೆಚ್ಚಿನ ನಾಯಕರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸಿದರು.

ಮತ್ತೊಂದೆಡೆ ಜಿಲ್ಲೆಯಾದ್ಯಂತ ಹಲವು ಸಂಘಸಂಸ್ಥೆ, ಸಾರ್ವಜನಿಕರು ಹಾಗೂ ಅಭಿಮಾನಿಗಳು ಅಗಲಿದ ಅಂಬರೀಶ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ ಅವರ ಸಾಧನೆ ಹಾಗೂ ಕೊಡುಗೆಯನ್ನು ಸ್ಮರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News