ಕೆಐಐಟಿ ವಿಶ್ವವಿದ್ಯಾನಿಲಯದಲ್ಲಿ ಹಿಂಸಾಚಾರ: ಲಿಫ್ಟ್ನಲ್ಲಿ ಕೂಡಿಹಾಕಿ ಹಲ್ಲೆ
Update: 2018-11-26 04:05 GMT
ಭುವನೇಶ್ವರ, ನ.26: ಇಲ್ಲಿನ ಕೆಐಐಟಿ ವಿಶ್ವವಿದ್ಯಾನಿಲಯದಲ್ಲಿ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ವಿದ್ಯಾರ್ಥಿಯೊಬ್ಬನನ್ನು ಲಿಫ್ಟ್ನಲ್ಲಿ ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ವಿದ್ಯಾರ್ಥಿನಿಯೊಬ್ಬರಿಗೆ ಕಿರುಕುಳ ನೀಡಿದ ಆರೋಪದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಆರಂಭವಾಗಿದ್ದು, ಈ ಸಂಬಂಧ ಐದು ಮಂದಿಯನ್ನು ಬಂಧಿಸಲಾಗಿದೆ.
ಎರಡನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿನಿ ಬಗ್ಗೆ ಮಾತನಾಡಿದ ಕಾರಣಕ್ಕೆ ಜಗಳ ಆರಂಭವಾಗಿದೆ. ವಿದ್ಯಾರ್ಥಿಗಳು ಕ್ಯಾಂಪಸ್ ಆಸ್ತಿಗಳನ್ನು ಧ್ವಂಸಗೊಳಿಸಿ, ವಿದ್ಯಾರ್ಥಿಗಳನ್ನು ಲಿಫ್ಟ್ನಲ್ಲಿ ಕೂಡಿಹಾಕಿ ಹಲ್ಲೆ ಮಾಡುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ದಾಖಲಾಗಿದೆ. ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ ಎರಡು ಹಾಸ್ಟೆಲ್ಗಳನ್ನು ತೆರವುಗೊಳಿಸಲಾಗಿದೆ.