ಅಂಬರೀಶ್ ಪಾರ್ಥಿವ ಶರೀರದ ಮೆರವಣಿಗೆ ಆರಂಭ

Update: 2018-11-26 07:40 GMT

ಬೆಂಗಳೂರು, ನ.26: ಅಗಲಿದ ನಾಯಕ , ನಟ ಅಂಬರೀಶ್ ಅವರ ಪಾರ್ಥಿವ ಶರೀರದ ಮೆರವಣಿಗೆ ಕಂಠೀರವ ಸ್ಟೇಡಿಯಂನಿಂದ ಆರಂಭಗೊಂಡಿದೆ.

ಕಂಠೀರವ ಸ್ಟೇಡಿಯಂನಿಂದ 1,800 ಹೂಗಳಿಂದ ಅಲಂಕೃತವಾದ ವಿಶೇಷ ವಾಹನದಲ್ಲಿ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಕಂಠೀರವ ಸ್ಟುಡಿಯೋಗೆ ತರಲಾಗುವುದು. 13 ಕಿ.ಮೀ ತನಕ ಸಾಗಲಿರುವ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗವಹಿಸಿದ್ದಾರೆ.  ಭದ್ರತೆಗಾಗಿ 11 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.

ಕಂಠೀರವ ಕ್ರೀಡಾಂಗಣದಲ್ಲಿಯೇ ಅಂಬರೀಶ್ ಅವರ ಪಾರ್ಥಿವ ಶರೀರದ  ಕೆಲ ಕಾಲ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಒಕ್ಕಲಿಗ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು. ಪುತ್ರ ಅಭಿಷೇಕ್ ಗೌಡ ಅಗ್ನಿ ಸ್ಪರ್ಶ ಮಾಡಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News