ಸಜೀಪ ಮೂಡ: ಬೈಕ್‌ಗೆ ಆಟೊರಿಕ್ಷಾ ಢಿಕ್ಕಿ; ಸವಾರ ಮೃತ್ಯು

Update: 2018-11-26 09:28 GMT

ಬಂಟ್ವಾಳ, ನ.26: ಆಟೊ ರಿಕ್ಷಾವೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸಜೀಪ ಮೂಡ ಗ್ರಾಮದ ಕೊಳಕೆ ಬರ್ಕೆ ಸಮೀಪ ರವಿವಾರ ತಡರಾತ್ರಿ ನಡೆದಿದೆ.

ಕೊಳಕೆ ಪೆರ್ವ ನಿವಾಸಿ ಮನ್ವಿತ್ ಮೃತಪಟ್ಟವರಾಗಿದ್ದಾರೆ. ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಮನ್ವಿತ್‌ರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ

ಬಂಟ್ವಾಳ ಸಂಚಾರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಳಕೆ ಬರ್ಕೆ ಸಮೀಪ ನಿರ್ಜನ ಪ್ರದೇಶದಲ್ಲಿ ಢಿಕ್ಕಿ ಹೊಡೆದ ಅಪರಿಚಿತ ವಾಹನ ಸ್ಥಳದಿಂದ ಪರಾರಿಯಾಗಿತ್ತು. ಬಳಿಕ ಸಾರ್ವಜನಿಕರ ನೆರವಿನಿಂದ ಅದು ಆಟೊ ರಿಕ್ಷಾ ಎಂಬುದನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಬಂಟ್ವಾಳ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News