ಜಾಫರ್ ಶರೀಫ್ ಮರಳಿ ಮಣ್ಣಿಗೆ

Update: 2018-11-26 18:23 GMT

ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್ ಶರೀಫ್(85) ಅವರ ಅಂತ್ಯಕ್ರಿಯೆಯನ್ನು ನಗರದ ಖುದ್ದೂಸ್ ಸಾಹೇಬ್ ಖಬರಸ್ಥಾನ್‌ದಲ್ಲಿ ಸೋಮವಾರ ಮಧ್ಯಾಹ್ನ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಕೋಲ್ಸ್‌ಪಾರ್ಕ್‌ನಲ್ಲಿರುವ ಜಾಫರ್ ಶರೀಫ್ ನಿವಾಸದಿಂದ ಅವರ ಪಾರ್ಥಿವ ಶರೀರವನ್ನು ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಗೆ ತರಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮೇಯರ್ ಗಂಗಾಂಬಿಕೆ, ಸಚಿವ ಯು.ಟಿ.ಖಾದರ್, ಶಾಸಕ ಎನ್.ಎ. ಹಾರಿಸ್, ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಇನ್ನಿತರ ಮುಖಂಡರು ಗೌರವ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor