ಉಡುಪಿ: ರಾಷ್ಟ್ರೀಯ ಹೆದ್ದಾರಿ ಕುರಿತ ಸಭೆ ಮುಂದೂಡಿಕೆ
Update: 2018-11-27 20:40 IST
ಉಡುಪಿ, ನ.27: ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿ ಹಾಗೂ ಹೆಜಮಾಡಿ ಮತ್ತು ಸಾಸ್ತಾನಗಳ ಟೋಲ್ ಸಂಗ್ರಹಗಳ ಕುರಿತು ಚರ್ಚಿಸಲು ನ.28ರಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.