ಬೆಂಗಳೂರು: ವಿಕಲಚೇತನ ಪುತ್ರನ ಕೊಲೆಗೈದು ಆತ್ಮಹತ್ಯೆಗೆ ಶರಣಾದ ತಂದೆ

Update: 2018-12-01 15:40 GMT

ಬೆಂಗಳೂರು, ಡಿ.1: ಪುತ್ರನನ್ನು ಕೊಲೆಗೈದ ಬಳಿಕ ತಂದೆಯೂ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಇಲ್ಲಿನ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಚಂದ್ರಶೇಖರ್ ಎಂಬಾತ ತನ್ನ ಮಗ ಲೋಕೇಶ್ ಅನ್ನು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.

ಲೋಕೇಶ್ ವಿಕಲಚೇತನನಾಗಿದ್ದ ಕಾರಣ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಹೀಗಾಗಿ ಮಗನನ್ನು ನೇಣು ಹಾಕಿ ಕೊಲೆ ಮಾಡಿದ ಚಂದ್ರಶೇಖರ್ ನಂತರ, ತಾನೂ ನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News