ಚನ್ನಗಿರಿ: ವಿಷ ಸೇವಿಸಿ ರೈತ ಆತ್ಮಹತ್ಯೆ

Update: 2018-12-01 18:32 GMT

ಚನ್ನಗಿರಿ,ಡಿ.1: ಸಾಲಬಾಧೆಯಿಂದ ಬೇಸತ್ತ ರೈತರೊಬ್ಬರು ಹೊಲದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬಸವಪಟ್ಟಣ ಪೊಲೀಸ್ ಠಾಣೆಯ ವ್ಯಾಪ್ತಿಯ ಯಲೋದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶಾಂತಪ್ಪ (68) ಆತ್ಮಹತ್ಯೆಗೆ ಶರಣಾದ ರೈತ. ಸಾಲ ಮರುಪಾವತಿಸುವಂತೆ ಬ್ಯಾಂಕ್ ನೋಟೀಸ್ ಹಾಗೂ ಖಾಸಗಿ ವ್ಯಕ್ತಿಗಳಿಂದ ಒತ್ತಡ ಹೆಚ್ಚಾದ ಹಿನ್ನಲೆಯಲ್ಲಿ ಶಾಂತಪ್ಪ ರವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 

ಖಾಸಗಿ ವ್ಯಕ್ತಿ ಮತ್ತು ಬ್ಯಾಂಕ್‍ಗಳಲ್ಲಿ ಸುಮಾರು 12 ಲಕ್ಷ ರೂ. ಸಾಲ ಮಾಡಿದ್ದ ರೈತ ಶಾಂತಪ್ಪ ಕೆಲವು ದಿನಗಳ ಹಿಂದೆ ಬ್ಯಾಂಕ್‍ನಿಂದ ಸಾಲ ಪಾವತಿಸುವಂತೆ ಬಂದಿದ್ದ ನೋಟಿಸ್ ನೋಡಿ ಸಾಲವನ್ನು ತೀರಿಸುವುದಕ್ಕೆ ದಾರಿ ತೋಚದೆ ತನ್ನ ಹೊಲದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಶಾಂತಪ್ಪಗೆ 6 ಜಮೀನಿದ್ದು, 2 ಎಕರೆ ಅಡಿಕೆ ತೋಟ ಮಾಡಿಕೊಂಡಿದ್ದು, ತೋಟ ಉಳಿಸಿಕೊಳ್ಳಲು 5 ಬೋರ್‍ವೆಲ್ ಕೊರೆಸಿ ಸಾಲ ಮಾಡಿದ್ದರು ಎನ್ನಲಾಗಿದ್ದು, ಈ ಕುರಿತು ಬಸವಾಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News