ಚಾಮರಾಜನಗರ: ಅಪರಿಚಿತ ವಾಹನ ಢಿಕ್ಕಿ; ವ್ಯಕ್ತಿ ಸಾವು

Update: 2018-12-02 15:33 GMT

ಚಾಮರಾಜನಗರ,ಡಿ.2: ವಾಹನವೊಂದು ಅಪರಿಚಿತನಿಗೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲಿಯೆ ಸಾವನ್ನಪ್ಪಿರುವ ಘಟನೆ‌ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ.

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಸವಾಪುರ ಬಳಿ ಘಟನೆ‌ ನಡೆದಿದ್ದು, ಸುಮಾರು 40 ವಯಸ್ಸಿನ ಅಪರಿಚಿತ ಪುರುಷನಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ನಂತರ ನಿಲ್ಲಿಸದೆ ಪರಾರಿಯಾಗಿದೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಗುಂಡ್ಲುಪೇಟೆ ಪೋಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News