ಶಿವಮೊಗ್ಗ: ಸಾಲಬಾಧೆಗೆ ಬೇಸತ್ತು ರೈತ ಆತ್ಮಹತ್ಯೆ

Update: 2018-12-04 12:38 GMT

ಶಿವಮೊಗ್ಗ, ಡಿ. 4: ಸಾಲದ ಬಾಧೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ರೈತರೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸೊರಬ ತಾಲೂಕಿನ ಶ್ಯಾಡಲಕೊಪ್ಪ ಗ್ರಾಮಲ್ಲಿ ನಡೆದಿದೆ. 

ವೀರಭದ್ರಪ್ಪ (65) ಆತ್ಮಹತ್ಯೆಗೆ ಶರಣಾದ ರೈತ ಎಂದು ಗುರುತಿಸಲಾಗಿದೆ. ಮೃತರಿಗೆ ಪತ್ನಿ, ಒಬ್ಬ ಪುತ್ರ, ನಾಲ್ವರು ಪುತ್ರಿಯರಿದ್ದಾರೆ. ಇವರ ಹೆಸರಿನಲ್ಲಿ 2 ಎಕರೆ 24 ಗುಂಟೆ ಜಮೀನಿತ್ತು. ಜಮೀನಿನ ಆಧಾರದ ಮೇಲೆ ಇಂಡುವಳ್ಳಿ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್‍ನಲ್ಲಿ 3 ಲಕ್ಷ ರೂ. ಸಾಲ ಪಡೆದಿದ್ದರು. 
ಆದರೆ ಕಾಲಮಿತಿಯಲ್ಲಿ ಸಾಲ ತೀರಿಸಲು ಇವರಿಗೆ ಸಾಧ್ಯವಾಗಿರಲಿಲ್ಲ. ಈ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ. ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News