ಶಿರೂರು: ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Update: 2018-12-04 15:05 GMT

ಬೈಂದೂರು, ಡಿ.4: ಶಿರೂರು ಸೋಚ್ ಚಾರಿಟೇಬಲ್ ಟ್ರಸ್ಟ್ ಹಾಗೂ ಶಿರೂರು ಯುನೈಟೆಡ್ ಗ್ರೂಪ್ ಓಮನ್ ಇವುಗಳ ವತಿಯಿಂದ ವಿದ್ಯಾರ್ಥಿ ಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಇತ್ತೀಚೆಗೆ ಹಡವಿನಕೋಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿತ್ತು.

ನಿವೃತ್ತ ಹಿರಿಯ ಮುಖ್ಯ ಶಿಕ್ಷಕ ಗೌಸ್ ಮಾಸ್ಟರ್ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕ ಮಂಜಯ್ಯ ಶೆಟ್ಟಿ, ಇರ್ಷಾದ್, ಬಡ್ಡು ಶಂಶುದ್ದೀನ್, ಪತ್ರಕರ್ತ ಅರುಣ್ ಕುಮಾರ್ ಶಿರೂರು, ಗ್ರಾಪಂ ಸದಸ್ಯರಾದ ನೂರ್ ಮುಹಮ್ಮದ್, ಹಬೀಬಾ, ಅನಿವಾಸಿ ಭಾರತೀಯ ನಿಸಾರ್ ಮಣೆಗಾರ್, ಗ್ರಾಪಂ ಸದಸ್ಯ ಫಾರೂಕ್ ಮುಲ್ಲಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕರುನಾಡ ಕಣ್ಮಣಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶಿರೂರು ಗ್ರಾಪಂ ಅಧ್ಯಕ್ಷೆ ದಿಲ್‌ಶಾದ್ ಬೇಗಂ ಅವರನ್ನು ಸನ್ಮಾನಿಸಲಾಯಿತು. ನಿವೃತ್ತ ಶಿಕ್ಷಕ ಇಬ್ರಾಹಿಂ ಮಾಸ್ಟರ್ ಸ್ವಾಗತಿಸಿದರು. ಸೋಚ್ ಅಸೋಸಿಯೇಶನ್ ಅಧ್ಯಕ್ಷ ಅಲ್ತಾಫ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News