ಎಕ್ಸಲೆಂಟ್ : ಎನ್‍ಡಿಎ ಲಿಖಿತ ಪರೀಕ್ಷೆಯಲ್ಲಿ ಮೂವರು ತೇರ್ಗಡೆ

Update: 2018-12-05 13:00 GMT

ಮೂಡುಬಿದಿರೆ, ಡಿ. 5: ಇತ್ತೀಚೆಗೆ ನಡೆದ ದೇಶದ ಪ್ರತಿಷ್ಠಿತ ಎನ್‍ಡಿಎ (ನ್ಯಾಶನಲ್ ಡಿಫೆನ್ಸ್ ಅಕಾಡಮಿ) ಲಿಖಿತ ಪರೀಕ್ಷೆಯಲ್ಲಿ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು, ಕಲ್ಲಬೆಟ್ಟು, ಮೂಡಬಿದಿರೆಯ 3 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ, ಸಂದರ್ಶನಕ್ಕೆ ಆಯ್ಕೆಯಾಗಿರುತ್ತಾರೆ.

ಅಂಕುಶ್ ಆಲಿ, ಕೀರ್ಥಿ ಬಿ.ಎನ್.ಸಿ ಹಾಗೂ ಸುಪ್ರೀತ್ ಎಸ್ ಬಿ. ತೇರ್ಗಡೆಯಾದ ವಿದ್ಯಾರ್ಥಿಗಳು.

ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತ ಜೈನ್, ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News