ಸಂಪುಟ ವಿಸ್ತರಿಸಿದರೆ ಮೈತ್ರಿ ಸರಕಾರ ಪತನ: ಜಗದೀಶ್ ಶೆಟ್ಟರ್

Update: 2018-12-05 14:38 GMT

ಬೆಳಗಾವಿ, ಡಿ. 5: ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆಯಾದರೆ ಸರಕಾರ ಪತನಗೊಳ್ಳುವುದು ನಿಶ್ಚಿತ. ಹೀಗಾಗಿ ಮುಂಬರುವ ಲೋಕಸಭೆ ಚುನಾವಣೆಯ ವರೆಗೂ ಸಂಪುಟ ವಿಸ್ತರಣೆಯಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಜನಾದೇಶದ ವಿರುದ್ಧ ರಚನೆಯಾಗಿದ್ದು, ಈ ಸರಕಾರ ಹೆಚ್ಚು ದಿನ ಉಳಿಯುವುದಿಲ್ಲ. ಕುಮಾರಸ್ವಾಮಿ ಸರಕಾರ ಅಸ್ಥಿರವಾಗಿದೆ ಎಂದು ಟೀಕಿಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸರಕಾರ ಮೈಸೂರು ಭಾಗದ 45 ತಾಲೂಕುಗಳಿಗಷ್ಟೇ ಸೀಮಿತವಾಗಿದ್ದು, ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಯನ್ನು ಸಂಪೂರ್ಣ ನಿರ್ಲಕ್ಷಿಸಿದೆ ಎಂದು ದೂರಿದ ಅವರು, ಮುಖ್ಯಮಂತ್ರಿ ಬೆಂಗಳೂರು ಬಿಟ್ಟು ಹೊರಗೆ ಬರುತ್ತಿಲ್ಲ ಎಂದು ಟೀಕಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News