ಉಡುಪಿ: ಡಿ. 7ರಿಂದ ಮಾನವೀಯ ಮೌಲ್ಯಗಳು ವಸ್ತು ಪ್ರದರ್ಶನ

Update: 2018-12-06 15:22 GMT

ಉಡುಪಿ, ಡಿ. 6: ಪ್ರವಾದಿ ಮುಹಮ್ಮದ್(ಸ) ಮಾನವ ಕುಲದ ಶ್ರೇಷ್ಠ ಮಾರ್ಗದರ್ಶಕ ಅಭಿಯಾನದ ಅಂಗವಾಗಿ ಮಾನವೀಯ ಮೌಲ್ಯಗಳು ಎಂಬ ವಿಷಯದಲ್ಲಿ ಉಡುಪಿ ಜಾಮಿಯ ಮಸೀದಿಯ ಬಳಿ 7 ದಿನಗಳ ವಸ್ತು ಪ್ರದರ್ಶನ ಮತ್ತು ಪುಸ್ತಕ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಕಳ ಹೊಸ್ಮಾರು ಬಲ್ಲೋಟು ಮಠದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರು ಸಂಜೆ 4:45ಕ್ಕೆ ವಸ್ತು ಪ್ರದರ್ಶನ ವಿಭಾಗವನ್ನು ಉದ್ಘಾಟಿಸುವರು. ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಪುಸ್ತಕ ವೆುೀಳ ವಿಭಾಗವನ್ನು ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಬ್ರಹ್ಮಾವರ ವಲಯ ಬಂಟರ ಸಂಘದ ಅಧ್ಯಕ್ಷ ಬಿ. ಭುಜಂಗ ಶೆಟ್ಟಿ, ಉಡುಪಿ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ವಿಠ್ಠಲದಾಸ್ ಬನ್ನಂಜೆ, ಜಯ ಸಿ.ಕೋಟ್ಯಾನ್ ಬೆಳ್ಳಂಪಳ್ಳಿ, ಅಧ್ಯಕ್ಷರು ದ.ಕ. ಮೊಗವೀರ ಮಹಾಜನ ಸಂಘ ಉಚ್ಚಿಲ. ಹಿರಿಯ ಪತ್ರಕರ್ತ ಕಿರಣ್ ಮಂಜನಬೈಲ್ ಹಾಗೂ ಅಕ್ಬರ್ ಅಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ಭಾವನಾ ಮಂಚ್, ಕರ್ನಾಟಕ ಇವರು ಅಧ್ಯಕ್ಷತೆ ವಹಿಸಲಿರುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News