ಶಿವಕುಮಾರ ಸ್ವಾಮೀಜಿ ಆರೋಗ್ಯವಾಗಿ ಹಿಂದಿರುಗಲಿದ್ದಾರೆ: ಡಾ.ಜಿ.ಪರಮೇಶ್ವರ್

Update: 2018-12-07 12:47 GMT

ಬೆಂಗಳೂರು, ಡಿ. 7: ತುಮಕೂರಿನ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರನ್ನು ಚೆನ್ನೈಗೆ ಏರ್ ಆ್ಯಂಬುಲೆನ್ಸ್ ಮೂಲಕ ಕಳುಹಿಸಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶ್ರೀಗಳ ಆರೋಗ್ಯದ ವಿಚಾರವಾಗಿ ಯಾರೂ ಆತಂಕಪಡುವ ಅಗತ್ಯವಿಲ್ಲ. ತಮಿಳುನಾಡು ಗೃಹ ಇಲಾಖೆಯೊಂದಿಗೆ ಸಂಹವನ ನಡೆಸಿದ್ದು, ಅಲ್ಲಿಯೂ ಸ್ವಾಮೀಜಿ ಅವರಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ತುಮಕೂರಿನಿಂದ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಈಗಾಗಲೇ ಅವರನ್ನು ಏರ್ ಆ್ಯಂಬುಲೆನ್ಸ್ ಮೂಲಕ ಚೆನ್ನೈಗೆ ಕಳುಹಿಸಲಾಗಿದೆ. ಶಿವಕುಮಾರ ಸ್ವಾಮಿಜಿ ಆರೋಗ್ಯವಾಗಿ ಹಿಂತಿರುಗಲಿದ್ದಾರೆಂದು ಪರಮೇಶ್ವರ್ ಇದೇ ವೇಳೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News