ಗೊಂದಲ ಸೃಷ್ಟಿಸುವುದು ಬಿಟ್ಟು ಬಿಜೆಪಿಯವರಿಗೆ ಬೇರೆ ಕೆಲಸವಿಲ್ಲ: ದಿನೇಶ್ ಗುಂಡೂರಾವ್

Update: 2018-12-07 13:35 GMT

ಬೆಂಗಳೂರು, ಡಿ. 7: ‘ಸಂಪುಟ ವಿಸ್ತರಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದೆ. ಕಾಂಗ್ರೆಸ್-ಜೆಡಿಎಸ್ ಮುಖಂಡರು ಒಮ್ಮತದ ತೀರ್ಮಾನ ಕೈಗೊಂಡಿದ್ದು, ಡಿ.22ಕ್ಕೆ ಸಂಪುಟ ವಿಸ್ತರಣೆಯಾಗಲಿದೆ. ಆದರೆ, ಈ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುತ್ತಿರುವ ಬಿಜೆಪಿಯವರಿಗೆ ಬೇರೆ ಕೆಲಸವಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಉಭಯ ಪಕ್ಷಗಳ ಮುಖಂಡರು ಸೇರಿ ಸಂಪುಟ ವಿಸ್ತರಣೆಗೆ ತೀರ್ಮಾನ ಮಾಡುವ ವೇಳೆ ಈ ಬಗ್ಗೆ ಸಂಶಯಪಡುವ ಅಗತ್ಯವೇ ಇಲ್ಲ. ನಿಗದಿಯಂತೆ ಸಂಪುಟ ವಿಸ್ತರಣೆ ಆಗಲಿದೆ ಎಂದರು.

ಸಂಪುಟ ವಿಸ್ತರಣೆಗೂ ಸರಕಾರ ಬೀಳುವುದಕ್ಕೂ ಯಾವುದೇ ಸಂಬಂಧ ಇಲ್ಲ. ಮೈತ್ರಿ ಸರಕಾರ ಸುಭದ್ರವಾಗಿದೆ. 5 ವರ್ಷಗಳ ಕಾಲ ಸರಕಾರ ಸುಗಮವಾಗಿ ನಡೆಯಲಿದೆ. ಆರೇ ತಿಂಗಳಲ್ಲೇ ಸರಕಾರ ಬೀಳಲಿದೆ ಎಂದ ಬಿಜೆಪಿಯವರು ಸರಕಾರ ಉರುಳಿಸಲು ಏನೇ ಪ್ರಯತ್ನ ನಡೆಸಿದರೂ, ಸಫಲ ಆಗುವುದಿಲ್ಲ ಎಂದು ತಿರುಗೇಟು ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News