ಅತಿ ಹೆಚ್ಚು ಧ್ವಜ ನಿಧಿ ಸಂಗ್ರಹಣೆ: ಕೆಎಸ್ಸಾರ್ಟಿಸಿಗೆ ನಾಲ್ಕನೆ ಬಾರಿ ಪ್ರಶಸ್ತಿ

Update: 2018-12-07 13:39 GMT

ಬೆಂಗಳೂರು, ಡಿ. 7: ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಸಮಾರಂಭದಲ್ಲಿ ರಾಜ್ಯದ ಸರಕಾರಿ ಸಂಸ್ಥೆಗಳ ಪೈಕಿ ಅತಿಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹಣಾ ಪ್ರಶಸ್ತಿಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ)ಗೆ ಲಭಿಸಿದ್ದು, ಸತತ ನಾಲ್ಕನೆ ಬಾರಿಯೂ ಸಂಸ್ಥೆ ಈ ಪ್ರಶಸ್ತಿ ಸಂದಿದೆ.

ಶುಕ್ರವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರು, ಕೆಎಸ್ಸಾರ್ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಕೆಎಸ್ಸಾರ್ಟಿಸಿಯ ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ಡಾ.ಕೆ.ಎನ್.ಇಂಗಳಗಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿವೃತ್ತ ನಿರ್ದೇಶಕ ಬ್ರಿಗೇಡಿಯರ್ ಎಸ್.ವಿ.ಸಜ್ಜನ್, ಏರ್ ಮಾರ್ಷಲ್ ಕೆ.ಎಂ.ರಾಮ ಸುಂದರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News