ಬಾಬರಿ ಮಸ್ಚಿದ್ ಧ್ವಂಸವು ಭಾರತದ ಜಾತ್ಯತೀತ ಪರಂಪರೆಯ ಮೇಲಿನ ದಾಳಿ: ಸಲೀಂ ಗುರುವಾಯನಕೆರೆ

Update: 2018-12-08 07:23 GMT

ಸೌದಿ ಅರೇಬಿಯಾ, ಡಿ.8: ಜಾತ್ಯತೀತ ಭಾರತ ದೇಶದಲ್ಲಿ ಬಾಬರಿ ಮಸ್ಜಿದ್ ಎಂಬುದು ಕೇವಲ ಮುಸ್ಲಿಮರ ಪ್ರಾರ್ಥನಾಲಯವಾಗಿರದೆ ಪ್ರಜಾತಂತ್ರ ವ್ಯವಸ್ಥೆಯು ಒದಗಿಸಿರುವ ಧಾರ್ಮಿಕ ಸ್ವಾತಂತ್ರ್ಯದ ಸಂಕೇತವೂ ಆಗಿತ್ತು. 467 ವರ್ಷಗಳ ಇತಿಹಾಸವಿರುವ ಮುಸ್ಲಿಮರ ಶ್ರದ್ಧಾ ಕೇಂದ್ರವನ್ನು ಫ್ಯಾಸಿಸ್ಟ್ ಶಕ್ತಿಗಳು ಧ್ವಂಸಗೊಳಿಸುವ ಮೂಲಕ ಸಂವಿಧಾನದ ಮೇಲೆ ದಾಳಿ ನಡೆಸಿದವು. ಆ ಹೊಡೆತದ ಪರಿಣಾಮವನ್ನು ಇಂದಿಗೂ ಭಾರತದ ಅಲ್ಪಸಂಖ್ಯಾತ ಸಮುದಾಯ, ದಲಿತ ಸಮುದಾಯ ಹಾಗೂ ಇತರ ಹಿಂದುಳಿದ ವರ್ಗಗಳು ಅನುಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸಂವಿಧಾನವು ನೀಡಿರುವ ಅವಕಾಶ, ಹಕ್ಕುಗಳನ್ನು ಪಡೆಯಲು ಸಂವಿಧಾನದ ಮೇಲಿನ ಭರವಸೆಗಳನ್ನು ಉಳಿಸಿಕೊಳ್ಳುತ್ತಾ ಪ್ರಜಾಸತ್ತಾತ್ಮಕ ಹೋರಾಟವನ್ನು ತೀವ್ರಗೊಳಿಸಬೇಕಾಗಿದೆ ಎಂದು ಇಂಡಿಯನ್ ಸೋಶಿಯಲ್ ಫೋರಮ್ ದ.ಕ. ಜಿಲ್ಲಾ ಸಮಿತಿ ಸದಸ್ಯರಾದ ಸಲೀಂ ಗುರುವಾಯನಕೆರೆ ಹೇಳಿದ್ದಾರೆ.

ಇಂಡಿಯನ್ ಸೋಶಿಯಲ್ ಫೋರಮ್, ಕರ್ನಾಟಕ ಚಾಪ್ಟರ್, ಅಭಾ - ಖಮೀಸ್ ಮುಶ್ಯತ್ ಘಟಕದ ವತಿಯಿಂದ ಇಲ್ಲಿನ ಖಮೀಸ್ ಮುಷ್ಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಬಾಬರಿ ಮಸ್ಜಿದ್ ಮರಳಿ ಪಡೆಯೋಣ ಭಾರತವನ್ನು ಮರಳಿ ಗಳಿಸೋಣ’ ಎಂಬ ಸಾರ್ವಜನಿಕ ಕಾರ್ಯಕ್ರಮದಲ್ಲಿ ವಿಷಯವನ್ನು ಮಂಡಿಸಿ ಮಾತನಾಡಿದರು

ಇಂಡಿಯನ್ ಸೋಶಿಯಲ್ ಫೋರಮ್ ಅಭಾ ಘಟಕದ ಕಾರ್ಯದರ್ಶಿ ಸಾದಿಕ್ ಉಳ್ಳಾಲ ಅಧ್ಯಕ್ಷತೆ ವಹಿಸಿದ್ದರು, ಇಂಡಿಯನ್ ಸೋಶಿಯಲ್ ಫೋರಮ್ ಅಭಾ ವಲಯಾಧ್ಯಕ್ಷ ಶರಫುದ್ದೀನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಇಂಡಿಯನ್ ಫ್ರಟರ್ನಿಟಿ ಫೋರಮ್ ಜಿದ್ದಾ ಜಿಲ್ಲಾ ಸಮಿತಿಯ ಸದಸ್ಯರಾದ ಇರ್ಷಾದ್ ಲಕ್ನೋ, ಇಂಡಿಯನ್ ಫ್ರಟರ್ನಿಟಿ ಫೋರಮ್ ಅಭಾ ವಲಯ ಕಾರ್ಯದರ್ಶಿ ಹನೀಫ್ ಜೋಕಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆರಿಫ್ ಬೆಳಪು  ಸ್ವಾಗತಿಸಿದರು. ಅಶೀರ್ ಪುಂಜಾಲಕಟ್ಟೆ ವಂದಿಸಿದರು. ಬದ್ರುದ್ದೀನ್ ಮೈಂದಾಳ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News