ಕಾಮಗಾರಿ ವಿಚಾರದಲ್ಲಿ ಸುಳ್ಳು ಪ್ರಚಾರ ಪಡೆಯುತ್ತಿರುವ ಶಾಸಕ ರಾಮದಾಸ್: ಮಾಜಿ ಮೇಯರ್ ಭೈರಪ್ಪ ಆರೋಪ

Update: 2018-12-08 17:25 GMT

ಮೈಸೂರು,ಡಿ.8: ಶಾಸಕ ರಾಮದಾಸ್ ಅವರು ಜೆಪಿ ನಗರದ ಅಭಿವೃದ್ಧಿ ಕಾಮಗಾರಿಗೆ ಯಾವುದೇ ಅನುದಾನವನ್ನು ತಂದಿಲ್ಲ, ಆದರೆ ಸಿಎಂ ಸಿದ್ದರಾಮಯ್ಯ ಅವಧಿಯಲ್ಲಿ ಮಂಜೂರಾಗಿರುವ ಕಾಮಗಾರಿಯನ್ನು ತಮ್ಮದೆಂದು ಸುಳ್ಳು ಪ್ರಚಾರ ಪಡೆಯುತ್ತಿದ್ದಾರೆ ಎಂದು ಮಾಜಿ ಮೇಯರ್ ಭೈರಪ್ಪ ಆರೋಪಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜೆಪಿ ನಗರದಲ್ಲಿ ಇತ್ತೀಚೆಗೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ, ಪತ್ರಿಕೆಗಳಿಗೆ ನೀಡಿರುವ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿದ ಅವರು, ಕೇವಲ ಸುಳ್ಳು ಪ್ರಚಾರ ನಡೆಸುತ್ತಿರುವ ಅವರು ಕ್ಷೇತ್ರಕ್ಕೆ ಯಾವುದೇ ಅನುದಾನ ತಂದಿಲ್ಲ. ಹಿಂದೆ ಅನುಮೋದನೆಗೊಂಡ ಕಾಮಗಾರಿಗಳಿಗೆ ಕೇವಲ ಶಿಲಾನ್ಯಾಸ ನೆರವೇರಿಸುತ್ತಾ ಪ್ರಚಾರ ಪಡೆಯುತ್ತಿದ್ದಾರೆ ಎಂದು ದೂರಿದರು.

ಸೂಯೆಜ್ ಫಾರಂ ಅನ್ನು ಶೀಘ್ರವಾಗಿ ಸ್ಥಳಾಂತರಗೊಳಿಸಿ. ಆ ಬಗ್ಗೆ ತಮಗೆ ಬೆಂಬಲ ನೀಡಲಿದ್ದು, ಕ್ಷೇತ್ರದ ಅಭಿವೃದ್ಧಿಯೇ ನಮ್ಮ ಉದ್ದೇಶವಾಗಿದ್ದು, ತಾವು ಕೈಗೊಳ್ಳುವ ಅಭಿವೃದ್ಧಿ ಯೋಜನೆಗಳಿಗೆ ತಾವು ಸಹ ಕೈಜೋಡಿಸುತ್ತಿವೆ. ಆದರೆ ತಾವು ಸುಳ್ಳು ಪ್ರಚಾರ ನಡೆಸುವುದನ್ನು ಕೈಬಿಡಬೇಕು ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನಗರಪಾಲಿಕೆ ಸದಸ್ಯ ಉಮಾಮಣಿ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News