ಕೇಂದ್ರ ಸಚಿವ ಸ್ಥಾನಕ್ಕೆ ಉಪೇಂದ್ರ ಕುಶ್ವಾಹ ರಾಜೀನಾಮೆ: ಮೋದಿ ಸರಕಾರಕ್ಕೆ ತೀವ್ರ ಹಿನ್ನಡೆ

Update: 2018-12-10 08:00 GMT

ಹೊಸದಿಲ್ಲಿ, ಡಿ.10: ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ಬಿಜೆಪಿ ಜೊತೆ ವೈಮನಸ್ಸು ಮುಂದುವರಿದಿರುವಂತೆಯೇ ಕೇಂದ್ರ ಸಚಿವ ರಾಷ್ಟ್ರೀಯ ಲೋಕ ಸಮತಾ ಪಕ್ಷ(ಆರ್‌ಎಲ್‌ಎಸ್‌ಪಿ)ದ ನಾಯಕ ಉಪೇಂದ್ರ ಕುಶ್ವಾಹ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜೊತೆಗೆ ಮಾತುಕತೆ ನಡೆಸಿದ ನಂತರ ಕುಶ್ವಾಹ ಈ ನಿರ್ಧಾರ ಪ್ರಕಟಿಸಿದ್ದಾರೆ.

 ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ ಆರ್‌ಎಲ್‌ಎಸ್‌ಪಿಗೆ ಬಿಜೆಪಿ ಹಾಗೂ ಜೆಡಿಯು ಕೇವಲ 2 ಸೀಟು ಹಂಚಿಕೆ ಮಾಡಿದ್ದವು. ಇದರಿಂದ ಅಸಮಾಧಾನ ಭುಗಿಲೆದ್ದಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News