ಕೋಲಾರ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಧರಣಿ

Update: 2018-12-10 09:32 GMT

ಕೋಲಾರ, ಡಿ.10: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ವತಿಯಿಂದ ನಗರದ ಗಾಂಧೀವನದಲ್ಲಿ ಇಂದು ಬೆಳಗ್ಗೆ ಧರಣಿ ನಡೆಯಿತು.

ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಧರಣಿ ನಡೆಸಿದ ಕಾರ್ಯಕರ್ತರು ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೂ ಮೇಕೆದಾಟು ಯೋಜನೆ ವಿಸ್ತರಿಸುವಂತೆ ಒತ್ತಾಯಿಸಿದರು.

ಎತ್ತಿನಹೊಳೆ, ಕೆಸಿ ವ್ಯಾಲಿ ಯೋಜನೆಯಿಂದ ನೀರು ಬಂದಿಲ್ಲ. ಮೇಕೆದಾಟು ಯೋಜನೆ ಜಾರಿಗೊಳಿಸಿ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರು ಕೊಡಿ ಎಂದು ಧರಣಿನಿರತರು ಷೋಷಣೆಗಳನ್ನು ಕೂಗಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News