ಡಿ. 13ರಂದು ಕಡಂಬು ಮಸೀದಿಯ ಉದ್ಘಾಟನೆ

Update: 2018-12-10 13:18 GMT

ಬಂಟ್ವಾಳ, ಡಿ. 10: ವಿಟ್ಲ ಪಡ್ನೂರು ಗ್ರಾಮದ ಕಡಂಬು ಎಂಬಲ್ಲಿ ಪುನರ್ ನಿರ್ಮಾಣಗೊಂಡ ಮಸೀದಿಯ ಉದ್ಘಾಟನಾ ಸಮಾರಂಭ ಡಿ. 13ರಂದು ಮಧ್ಯಾಹ್ನ ನಡೆಯಲಿದೆ ಎಂದು ಕಡಂಬು ಜುಮಾ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಪಿ ಅಬ್ದುಲ್ ಖಾದರ್ ತಿಳಿಸಿದ್ದಾರೆ. 

ಅವರು ಸೋಮವಾರ ವಿಟ್ಲ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಂದು ಮಧ್ಯಾಹ್ನ 12ಕ್ಕೆ ಕಾಸರಗೋಡು ಖಾಝಿ ಅಲಿಕುಟ್ಟಿ ಮುಸ್ಲಿಯಾರ್ ಹಾಗೂ ಉಡುಪಿ ಜಿಲ್ಲಾ ಖಾಝಿ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ಅವರ ಜಂಟಿ ನೇತೃತ್ವದಲ್ಲಿ ಉದ್ಘಾಟನೆಗೊಳ್ಳಲಿದೆ. ಸಂಜೆ ನಡೆಯುವ ಸಭಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಮಾಜಿ ಸಚಿವ ಬಿ ರಮಾನಾಥ ರೈ, ಜಿಪಂ ಸದಸ್ಯ ಎಂ.ಎಸ್, ಮುಹಮ್ಮದ್, ಎಸ್‍ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಪಾನ್ಸೋ ಫ್ರಾಂಕೋ, ಜೆಡಿಎಸ್ ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಪಿಎಫ್‍ಐ ರಾಷ್ಟ್ರೀಯ ಸಮಿತಿ ಸದಸ್ಯ ಕೆ.ಎಂ ಶರೀಫ್, ಮಾಧವ ಮಾವೆ, ಸಿಪಿಐನ ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೇವಿಂಜ, ಹಾಗೂ ಸಾಮಾಜಿಕ, ಧಾರ್ಮಿಕ, ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. 

ಪತ್ರಿಕಾಗೋಷ್ಠಿಯಲ್ಲಿ ಕಡಂಬು ಜುಮಾ ಮಸೀದಿ ಆಡಳಿತ ಸಮಿತಿ ಕಾರ್ಯದರ್ಶಿ ಬಿ.ಪಿ. ಮುಹಮ್ಮದ್, ಸದಸ್ಯರಾದ ಇಬ್ರಾಹಿಂ ಬಿ, ಮುಹಮ್ಮದ್ ಕಡಂಬು, ಗ್ರಾಪಂ ಸದಸ್ಯ ವಿ.ಕೆ ಅಬ್ದುಲ್ ರಹಿಮಾನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News