ಪ್ರತಿಯೊಬ್ಬ ಭಾರತೀಯನಿಗೂ ಆತಂಕದ ವಿಚಾರ: ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್

Update: 2018-12-10 15:20 GMT

ಹೊಸದಿಲ್ಲಿ, ಡಿ.10: ಆರ್ ಬಿಐ ಗವರ್ನರ್ ಸ್ಥಾನಕ್ಕೆ ಊರ್ಜಿತ್ ಪಟೇಲ್ ರಾಜೀನಾಮೆ ನೀಡಿರುವ ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್, “ಇದು ಪ್ರತಿಯೊಬ್ಬ ಭಾರತೀಯನಿಗೂ ಆತಂಕದ ವಿಚಾರ” ಎಂದಿದ್ದಾರೆ.

“ಅವರ ಅಭಿಪ್ರಾಯವನ್ನು ಗೌರವಿಸಬೇಕು. ಈ ನಿರ್ಧಾರ ಕೈಗೊಳ್ಳಲು ಕಾರಣವಾದ ಬಿಕ್ಕಟ್ಟಿನ ಬಗ್ಗೆ ನಾವು ತಿಳಿದುಕೊಳ್ಳಬೇಕು. ಬೆಳವಣಿಗೆ ಮತ್ತು ಸುಸ್ಥಿರ ಬೆಳವಣಿಗೆ ಹಾಗು ಆರ್ಥಿಕತೆಗೆ ನಮ್ಮ ಸಂಸ್ಥೆಯ ಶಕ್ತಿಯು ಅತ್ಯಂತ ಅಗತ್ಯವಾಗಿರುವುದರಿಂದ ಅವರ ರಾಜೀನಾಮೆಯು ಪ್ರತಿಯೊಬ್ಬ ಭಾರತೀಯನಿಗೂ ಆತಂಕದ ವಿಚಾರ” ಎಂದವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News