ಬಿಜೆಪಿಯವರ ಪ್ರತಿಭಟನೆ ಯಾವ ಪುರುಷಾರ್ಥಕ್ಕೆ?: ಸಚಿವ ಪ್ರಿಯಾಂಕ ಖರ್ಗೆ

Update: 2018-12-10 16:45 GMT

ಬೆಳಗಾವಿ, ಡಿ.10: ಯಾವ ಪುರುಷಾರ್ಥಕ್ಕೆ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿಯಲ್ಲಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಸಂಬಂಧ ತೀವ್ರ ವಾಗ್ದಾಳಿ ನಡೆಸಿದ ಅವರು, ಅವರ ತಟ್ಟೆಯಲ್ಲಿ ಕತ್ತೆ ಬಿದ್ದಿದೆ. ನೊಣ ಹುಡುಕಲು ಹೊರಟಿದ್ದಾರೆ. ರಾಜ್ಯ ಸರ್ಕಾರ ರೈತರ ಪರವಾಗಿದೆ. ಅವರದೇ ಪಕ್ಷದ ಕೇಂದ್ರ ಸರ್ಕಾರ ರೈತ ವಿರೋಧಿಯಾಗಿದೆ. ಈವರೆಗೂ ರೈತ ಪರವಾದ ಒಂದು ಕೆಲಸವನ್ನೂ ಮಾಡಿಲ್ಲ. ಪ್ರತಿಭಟನೆ ಮಾಡುವುದಾದರೆ ದಿಲ್ಲಿಯಲ್ಲಿ ಮಾಡಲಿ. ಅವರು ನಮ್ಮ ಬಗ್ಗೆ ಏನು ಹೇಳುವುದು ಎಂದು ಖರ್ಗೆ ಕಿಡಿಕಾರಿದರು.

ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ ರೈತರಿಗೆ ಋಣಮುಕ್ತ ಪತ್ರ ವಿತರಿಸಿದ್ದಾರೆ. 49 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಸರ್ಕಾರ ಮಾಡಿದೆ. ಇದನ್ನು ಬಿಜೆಪಿಯವರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News