ಸ್ನೇಹಿತರ ಮೇಲೆ ಹಲ್ಲೆ: ಹಣ ದೋಚಿ ಪರಾರಿ

Update: 2018-12-10 18:03 GMT

ಬೆಂಗಳೂರು, ಡಿ.10: ನಗರದ ಮೆಜೆಸ್ಟಿಕ್ ಬಳಿ ರವಿವಾರ ಮಧ್ಯರಾತ್ರಿ ನಡೆದು ಹೋಗುತ್ತಿದ್ದ ಸ್ನೇಹಿತರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಮೂರು ಸಾವಿರ ಹಣ ಕಸಿದು ಪರಾರಿಯಾಗಿರುವ ಘಟನೆ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗೌರವ್ ಕುಮಾರ್ ಹಾಗೂ ಅಮೀತ್ ಕುಮಾರ್ ಒಟ್ಟಿಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಹಿಂದಿನಿಂದ ಹಿಂಬಾಲಿಸಿಕೊಂಡು ಬಂದಿದ್ದ ಇಬ್ಬರು ದರೋಡೆಕೋರರು ಅಡ್ಡಗಟ್ಟಿ ಚಾಕುವಿನಿಂದ ಹಲ್ಲೆ ನಡೆಸಿ ಹಣ ಕಸಿದು ಪರಾರಿಯಾಗಿದ್ದಾರೆ. ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News