ಮೈಸೂರು: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ದರೋಡೆ

Update: 2018-12-10 18:48 GMT

ಮೈಸೂರು,ಡಿ.10: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆ ಬಾಗಿಲನ್ನು ಮೀಟಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಮತ್ತು ಹಣವನ್ನು ಕಳ್ಳರು ಕದ್ದೊಯ್ದ ಘಟನೆ ಹೆಬ್ಬಾಳಿನಲ್ಲಿ ನಡೆದಿದೆ.

ಹೆಬ್ಬಾಳದ 13ನೇ ಮುಖ್ಯರಸ್ತೆಯ ನಿವಾಸಿ ಪಿ.ಎಸ್.ಜಯಚಂದ್ರ ಅವರ ಮನೆಯ ಬಾಗಿಲು ಮೀಟಿ ಒಳನುಗ್ಗಿದ ಕಳ್ಳರು 2 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಮತ್ತು 4 ಲಕ್ಷ ರೂ. ನಗದನ್ನು ಕದ್ದೊಯ್ದಿದ್ದಾರೆ. ಮನೆಯವರು ಡಿ.6 ರಂದು ಬೆಂಗಳೂರಿಗೆ ತೆರಳಿದ್ದರು. ಶನಿವಾರ ವಾಪಸ್ ಬಂದು ನೋಡಿದಾಗ ಮನೆಯ ಮುಂಬಾಗಿಲು ಮೀಟಿದ್ದು ಕಂಡು ಬಂದಿದೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News