ಮೋದಿ ಮೇಲಿನ ವಿಶ್ವಾಸವನ್ನು ಜನತೆ ಕಳೆದುಕೊಳ್ಳುತ್ತಿದ್ದಾರೆ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್

Update: 2018-12-11 13:34 GMT

ಬೆಳಗಾವಿ,ಡಿ.11: ಪಂಚ ರಾಜ್ಯ ಚುನಾವಣಾ ಫಲಿತಾಂಶದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಕೆಳಕ್ಕೆ ಉದುರಿದಂತೆ ಆಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದರು.

ಮಂಗಳವಾರ ಸುವರ್ಣ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ತರಗೆಲೆಗಳಂತೆ ಕೆಳಗೆ ಉದುರಿದೆ. ಅವರ ಮೇಲಿನ ವಿಶ್ವಾಸವನ್ನು ಜನತೆ ಕಳೆದುಕೊಳ್ಳುತ್ತಿರುವುದಕ್ಕೆ ಇದು ಸ್ಪಷ್ಟ ನಿದರ್ಶನವಾಗಿದೆ ಎಂದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ವಿಶ್ವಾಸವಿಟ್ಟು ಜನರು ಮತ ಚಲಾಯಿಸಿದ್ದರು. ಆದರೆ, ಈಗ ಅವರಿಗೆ ನಿರಾಸೆಯಾಗಿದೆ. ಬಿಜೆಪಿ ಸರಕಾರವಿದ್ದ ರಾಜ್ಯಗಳಲ್ಲೂ ವ್ಯತಿರಿಕ್ತ ಫಲಿತಾಂಶ ಬಂದಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರಕಾರ ಸ್ಥಳೀಯ ಸಮಸ್ಯೆಗಳಿಗೆ ಆದ್ಯತೆ ನೀಡುತ್ತಿಲ್ಲ. ಹಾಗಾಗಿ ಜನ ಬಿಜೆಪಿಯನ್ನು ತಿರಸ್ಕರಿಸುತ್ತಿದ್ದಾರೆ ಎಂದರು.

ಇನ್ನು, ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಮುಂದುವರೆಸಲಾಗುವುದು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News