ದೇಶದ ಜನತೆ ಬಿಜೆಪಿಯ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದಾರೆ: ಈಶ್ವರ ಖಂಡ್ರೆ
Update: 2018-12-11 16:16 GMT
ಬೆಂಗಳೂರು, ಡಿ.11: ಪಂಚ ರಾಜ್ಯಗಳ ಫಲಿತಾಂಶ ದೇಶದ ಜನತೆ ಬಿಜೆಪಿಯ ಬಗ್ಗೆ ವಿಶ್ವಾಸ ಕಳೆದುಕೊಂಡಿರುವುದನ್ನು ತೋರಿಸುತ್ತದೆ. ಅಲ್ಲದೆ, ಜನರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಣ್ಣ ಬಣ್ಣದ ಮಾತುಗಳಿಗೆ ಮರಳಾಗುವುದಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದ್ದಾರೆ.
2019 ರಲೋಕಸಭಾ ಚುನಾವಣೆಗೆ ಇದು ಮುನ್ನುಡಿಯಾಗಿದ್ದು, ಕಾಂಗ್ರೆಸ್ ನೇತೃತ್ವದ ಮಹಾ ಮೈತ್ರಿ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಂಡ ರೀತಿಯಲ್ಲಿ ಜಯ ಸಾಧಿಸಲಿದೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿಯಾಗಿದೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ಹೇಳಿದ್ದಾರೆ.