ಸುಂಟಿಕೊಪ್ಪ: ಯುವ ಸಂಸತ್ತು ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Update: 2018-12-12 14:38 GMT

ಸುಂಟಿಕೊಪ್ಪ,ಡಿ.12: ಜಿಲ್ಲಾ ಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ಸಿ.ಬಿ.ನಿಸರ್ಗ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಂಸದೀಯ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ಮಾದಾಪುರ ಶ್ರೀಮತಿ ಡಿ.ಚೆನ್ನಮ್ಮ ಕಾಲೇಜು ವಿದ್ಯಾರ್ಥಿನಿ ಸಿ.ಬಿ.ನಿಸರ್ಗ ರವರು ಪ್ರಥಮ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಈಕೆ ಗರಗಂದೂರು ನಿವಾಸಿಗಳಾದ ಚೀಕಂಡ ಭೀಮಯ್ಯ ಮತ್ತು ಆಶಾ ದಂಪತಿಯ ಪುತ್ರಿ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News