ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲರ ಸಲಹೆಗಾರ ಹುದ್ದೆ ತ್ಯಜಿಸಿದ ಬಿ.ಬಿ ವ್ಯಾಸ್

Update: 2018-12-12 15:24 GMT

ಹೊಸದಿಲ್ಲಿ,ಡಿ.12: ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲರ ಸಲಹೆಗಾರ ಹುದ್ದೆಗೆ ಬಿ.ಬಿ ವ್ಯಾಸ್ ರಾಜೀನಾಮೆ ನೀಡಿದ್ದಾರೆ. ಅವರನ್ನು ಕೇಂದ್ರ ಸಾರ್ವಜನಿಕ ಸೇವಾ ಆಯೋಗ (ಯುಪಿಎಸ್‌ಸಿ)ದ ಸದಸ್ಯರನ್ನಾಗಿ ನೇಮಕ ಮಾಡಿದ ನಂತರ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ವ್ಯಾಸ್ ಅವರು ತನ್ನ ರಾಜೀನಾಮೆಯನ್ನು ರಾಜ್ಯಪಾಲ ಸತ್ಯಪಾಲ್ ಮಲಿಕ್‌ಗೆ ಒಪ್ಪಿಸಿರುವುದಾಗಿ ಸರಕಾರದ ಮೂಲಗಳು ತಿಳಿಸಿವೆ. ರಾಜ್ಯಪಾಲರ ನಾಲ್ವರು ಸಲಹೆಗಾರರಲ್ಲಿ ವ್ಯಾಸ್ ಒಬ್ಬರಾಗಿದ್ದರು. 1986ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ವ್ಯಾಸ್ ಈ ಹಿಂದೆ ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News